Thursday, February 17, 2011

ಕಾಲದ ಒಡಲು

ಕಾಲದ ಒಡಲಲಿ ಎಲ್ಲವು ಒಂದು
ಅಂದು, ಇಂದು, ಎಂದೂ, ಮುಂದು
ನಾಳೆಗೆ ಬೇಡ ಇಂದಿನ ಹಂಗು
ಕಾಲದ ವೇಗಕೆ ತಡೆಯೇ ಇಲ್ಲ
ಉರುಳಿದ ತಲೆಗೆ ಲೆಕ್ಕವೇ ಇಲ್ಲ

ಬುದ್ಧನು ಬಂದ, ಬಸವಣ್ಣನು ಹೋದ
ಗಾಂಧಿ, ವಿವೇಕರು ಫೋಟೋದಲಿ ಚಂದ
ಅಂಗುಲಿಮಾಲ ಬುದ್ದಿಯ ಕಲಿತರು
ಬುದ್ಧಮಾತು ಬರಿ ಪಾಠ
ಬಸವಣ್ಣನ ಸುಧಾರಣೆ, ಗಾಂಧಿಯ ತತ್ವ
ವಿವೇಕರ ನಡೆನುಡಿ ಬೇಕೇಬೇಕು
ಪಾಲನೆಗಲ್ಲ, ಆಲಾಪನೆಗಷ್ಟೇ.
*****
ಕಾಲದ ಉರುಳಿಗೆ ಸಿಗದವರಿಲ್ಲ
ಕಳ್ಳರು, ಸುಳ್ಳರು, ಎಲ್ಲವ ಬಲ್ಲರು
ಬಲ್ಲವರಾರು ಉಳಿಯೋದಿಲ್ಲ
ಉಳಿದದ್ದೆಲ್ಲ ಬಲ್ಲವರಿಲ್ಲ
ಬಲ್ಲವರಿದ್ದರು ತಿಳಿಯುವುದಿಲ್ಲ
ಅಳಿದ ಮೇಲೆ ಹೊಗಳುವರೆಲ್ಲ

ಮಹಾಪುರುಷರ ಮಾತುಗಳೆಲ್ಲ
ಕಾಲಕ್ಕೆ ತಕ್ಕಂತೆ ಬದಲಾಗುವುವು ಇಲ್ಲಿ
ಅಣ್ಣನ ವಚನ, ಅಕ್ಕನ ವಚನ
ಭ್ರಷ್ಟರ ಬಾಯಲಿ ನಿತ್ಯವೂ ಗಾಯನ
ಹೇಳುವುದೊಂದು, ಮಾಡುವುದೊಂದು
ಒಂದಕ್ಕೊಂದು ಹೊಂದಾಣಿಕೆಯಿಲ್ಲ
ಆವಕ್ಕಾಗಿ ನೋಡುವರೆಲ್ಲ
ಮತವನು ಕೊಟ್ಟ ಜನರೆಲ್ಲಾ
ಯಾವುದು ಸತ್ಯ, ಯಾವುದು ಸುಳ್ಳು
ಒಂದೂ ಇಲ್ಲಿ ಗೊತ್ತಾಗೋದಿಲ್ಲ

ಕಾಲದ ಒಡಲಲಿ ಎಲ್ಲವು ಒಂದು
ಬಲ್ಲವರಾರು ಇದನಿಂದು !

No comments: