ಅದು ಶುರುವಾಗುವುದು ಹೀಗೆ.
ಬೆಳಗು ಇನ್ನೂ ಹರಿದಿರಲಿಲ್ಲ. ಒಂದೆಡೆ ಕೊರೆಯುವ ಚಳಿ. ಆದರೆ ಚಳಿಯೆಂದು ಕುಳಿತರೆ ಹೊಟ್ಟೆ ಹೊರೆಯುವುದು ಹೇಗೆ. ಎದ್ದು ಹೋಗಲೇ ಬೇಕು. ಚಿಂದಿ ಆಯೋದಕ್ಕೆ. ಮಲಗುವ ಗೂಡುಗಳಿಂದ ಹೊರಬಂದು ಕೊರೆಯುವ ಚಳಿಯಲ್ಲಿ ಕೆಲವರು ಚಿಂದಿ ಅರಸಿ ಹೋರಹೋಗುತ್ತಾರೆ. ಹುಡುಗಿಯ ಕಳ್ಳಸಂಬಂಧಿ ಗುಡಿ ಹೊದ್ದು ಹೊರಗೋಡುತ್ತಾನೆ. ರೋಗಗ್ರಸ್ತೆ ಹೆಂಗಸು ಕೆಮ್ಮುತ್ತಾ ನರಳುತ್ತಾಳೆ. ಆಕೆಯ ಗಂಡ ಹೆಂಡತಿ ಸತ್ತರೆ ಸಾಕೆಂದು ಆಶಿಸುವಂತೆ ತನ್ನದೇ ಕೆಲಸದಲ್ಲಿ ನಿರತನಾಗಿದ್ದಾನೆ. ಕೆಲಸ ಮಾಡದ ಸೋಮಾರಿಗಳು ತಮ್ಮದೇ ಹರಟೆಯಲ್ಲಿ ತೊಡಗಿದ್ದಾರೆ. ಕೆಳಗಿನವರ ಲೋಕದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗುತ್ತದೆ.
ಇದು ಎನ್ಎಸ್ ಡಿಯ ಬೆಂಗಳೂರು ಚಾಪ್ಟರ್ ನಲ್ಲಿ ತರಬೇತಿ ಪಡೆದ ಮೊದಲ ತಂಡ ಪ್ರಸ್ತುತಪಡಿಸಿದ ' ಈ ಕೆಳಗಿನವರು' ನಾಟಕ. ರಷ್ಯನ್ ಸಾಹಿತಿ ಮ್ಯಾಕ್ಸಿಂ ಗೋರ್ಕಿಯ lower depths ನಾಟಕವನ್ನು ಕನ್ನಡಕ್ಕೆ ರೂಪಂತರಿಸಿದ ನಾಟಕವಿದು. ಇದನ್ನು ಅದೆಷ್ಟು ಚೆನ್ನಾಗಿ ಕನ್ನಡಕ್ಕೆ ಬಿ.ಟಿ.ದೇಸಾಯಿಯವರು ಕನ್ನಡಕ್ಕೆ ರೂಪಾಂತರಿಸಿದ್ದಾರೆಂದರೆ ಇಡೀ ನಾಟಕ ಕನ್ನಡದ್ದೇ ಮಣ್ಣಿನ ಕಥೆಯಂತಿದೆ. ಅದರ ಭಾಷೆ, ಶೈಲಿ, ವಸ್ತು, ಇತಿಹಾಸ ಎಲ್ಲದರಲ್ಲೂ ಕರ್ನಾಟಕ, ಕನ್ನಡ ಮತ್ತು ಭಾರತದ ಒಳಗಿನ ಕಥೆಯಾಗಿ ಮಾರ್ಪಟ್ಟಿದೆ. ರಷ್ಯಾದ ಬರಹಗಾರನ ಒಟ್ಟು ಆಶಯವನ್ನು ಕನ್ನಡದ ಪರಿಸರದೊಳಗೆ ಬೆರೆಸಿ ತೋರಿಸಲಾಗಿದೆ.
ನಾಟಕ್ಕಾಗಿ ತುಂಬಾ ಅದ್ಭುತ ಸೆಟ್ ಹಾಕಲಾಗಿದೆ. ಅದೇ ಸೆಟ್ ನಲ್ಲಿ ಕೆಳಗಿನವರ ಲೋಕ ನಿಧಾನಕ್ಕೆ ಅನಾವರಣಗೊಳ್ಳುತ್ತಾ ಹೋಗುತ್ತದೆ. ಅಲ್ಲಿನ ವಾಸಿಗಳಲ್ಲಿ ಒಬ್ಬೊಬ್ಬರದ್ದೂ ಒಂದೊಂದು ಕಥೆ. ಕೆಲವರು ಜೈಲಿಗೂ ಹೋಗಿ ಬಂದವರು. ಮನೆ ಬಿಟ್ಟು ಬಂದವರು. ಪರಿವಾರ ತೊರೆದು ಪರದೇಶಿಗಳಾದವರು. ಅವರ ನಡುವೆ ಜಗಳವಿದೆ. ಕೋಪ ತಾಪಗಳು ಆಗಾಗ್ಗೆ ನಡೆಯುತ್ತವೆ. ಆದರೆ ಅದೆಲ್ಲವನ್ನೂ ಮೀರಿದ ಅನ್ಯೋನ್ಯತೆಯಿದೆ. ಸಮಾಜದ ಅಂಕುಡೊಂಕುಗಳ ಬಗ್ಗೆ ಈ ಕೆಳಗಿನವರು ಒಂದು ಪ್ರಬುದ್ಧ ದೃಷ್ಟಿಕೋನವನ್ನೂ ಹೊಂದಿದ್ದಾರೆ.
ಅಲ್ಲಿಗೆ ಬರುವ ಅಜ್ಜಯ್ಯ ತನ್ನದೇ ಕಲ್ಯಾಣ ರಾಜ್ಯ ಹುಡುಕುತ್ತಾ ಹೊರಟವನು. ಇಂದು ಅಲ್ಲಿಗೆ ಬಂದಿದ್ದನಷ್ಟೆ. ಅವರ ಬದುಕಿನ ಮೇಲೆ ಅಜ್ಜಯ್ಯ ಪ್ರಭಾವ ಬೀರುತ್ತಾನೆ. ಅವರ ಕಥೆಗಳಿಗೆ ಕಿವಿಯಾಗುತ್ತಾನೆ. ಅವರ ಭಾವನೆಗಳಿಗೆ ಮಾತಾಗುತ್ತಾನೆ. ಅವರ ಬದುಕಿಗೆ ದಾರಿಯಾದಂತೆ ಕಾಣುತ್ತಾನೆ.
ಸುಮಾರು ಎರಡೂವರೆಗಂಟೆಗಳ ಸುದೀರ್ಘನಾಟಕವಿದು. ಬದುಕಿನ ಸಂಕೀರ್ಣತೆಯನ್ನು ಮನಸ್ಸಿಗೆ ನಾಟುವಂತೆ ತೆರದಿಡಲಾಗಿದೆ. ನಾಟಕದಲ್ಲಿ ಹಾಸ್ಯವಿದೆ. ಗಂಭೀರ ಚಿಂತನೆಯಿದೆ. ನಗುವಿದೆ. ಅಳುವಿದೆ. ಸಂಗೀತವಿದೆ. ಒಂದು ಅದ್ಭುತ ಲೋಕದ ಅನಾವರಣಗೊಳಿಸಲಾಗಿದೆ.
ಬೆಳಗು ಇನ್ನೂ ಹರಿದಿರಲಿಲ್ಲ. ಒಂದೆಡೆ ಕೊರೆಯುವ ಚಳಿ. ಆದರೆ ಚಳಿಯೆಂದು ಕುಳಿತರೆ ಹೊಟ್ಟೆ ಹೊರೆಯುವುದು ಹೇಗೆ. ಎದ್ದು ಹೋಗಲೇ ಬೇಕು. ಚಿಂದಿ ಆಯೋದಕ್ಕೆ. ಮಲಗುವ ಗೂಡುಗಳಿಂದ ಹೊರಬಂದು ಕೊರೆಯುವ ಚಳಿಯಲ್ಲಿ ಕೆಲವರು ಚಿಂದಿ ಅರಸಿ ಹೋರಹೋಗುತ್ತಾರೆ. ಹುಡುಗಿಯ ಕಳ್ಳಸಂಬಂಧಿ ಗುಡಿ ಹೊದ್ದು ಹೊರಗೋಡುತ್ತಾನೆ. ರೋಗಗ್ರಸ್ತೆ ಹೆಂಗಸು ಕೆಮ್ಮುತ್ತಾ ನರಳುತ್ತಾಳೆ. ಆಕೆಯ ಗಂಡ ಹೆಂಡತಿ ಸತ್ತರೆ ಸಾಕೆಂದು ಆಶಿಸುವಂತೆ ತನ್ನದೇ ಕೆಲಸದಲ್ಲಿ ನಿರತನಾಗಿದ್ದಾನೆ. ಕೆಲಸ ಮಾಡದ ಸೋಮಾರಿಗಳು ತಮ್ಮದೇ ಹರಟೆಯಲ್ಲಿ ತೊಡಗಿದ್ದಾರೆ. ಕೆಳಗಿನವರ ಲೋಕದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗುತ್ತದೆ.
ಇದು ಎನ್ಎಸ್ ಡಿಯ ಬೆಂಗಳೂರು ಚಾಪ್ಟರ್ ನಲ್ಲಿ ತರಬೇತಿ ಪಡೆದ ಮೊದಲ ತಂಡ ಪ್ರಸ್ತುತಪಡಿಸಿದ ' ಈ ಕೆಳಗಿನವರು' ನಾಟಕ. ರಷ್ಯನ್ ಸಾಹಿತಿ ಮ್ಯಾಕ್ಸಿಂ ಗೋರ್ಕಿಯ lower depths ನಾಟಕವನ್ನು ಕನ್ನಡಕ್ಕೆ ರೂಪಂತರಿಸಿದ ನಾಟಕವಿದು. ಇದನ್ನು ಅದೆಷ್ಟು ಚೆನ್ನಾಗಿ ಕನ್ನಡಕ್ಕೆ ಬಿ.ಟಿ.ದೇಸಾಯಿಯವರು ಕನ್ನಡಕ್ಕೆ ರೂಪಾಂತರಿಸಿದ್ದಾರೆಂದರೆ ಇಡೀ ನಾಟಕ ಕನ್ನಡದ್ದೇ ಮಣ್ಣಿನ ಕಥೆಯಂತಿದೆ. ಅದರ ಭಾಷೆ, ಶೈಲಿ, ವಸ್ತು, ಇತಿಹಾಸ ಎಲ್ಲದರಲ್ಲೂ ಕರ್ನಾಟಕ, ಕನ್ನಡ ಮತ್ತು ಭಾರತದ ಒಳಗಿನ ಕಥೆಯಾಗಿ ಮಾರ್ಪಟ್ಟಿದೆ. ರಷ್ಯಾದ ಬರಹಗಾರನ ಒಟ್ಟು ಆಶಯವನ್ನು ಕನ್ನಡದ ಪರಿಸರದೊಳಗೆ ಬೆರೆಸಿ ತೋರಿಸಲಾಗಿದೆ.
ನಾಟಕ್ಕಾಗಿ ತುಂಬಾ ಅದ್ಭುತ ಸೆಟ್ ಹಾಕಲಾಗಿದೆ. ಅದೇ ಸೆಟ್ ನಲ್ಲಿ ಕೆಳಗಿನವರ ಲೋಕ ನಿಧಾನಕ್ಕೆ ಅನಾವರಣಗೊಳ್ಳುತ್ತಾ ಹೋಗುತ್ತದೆ. ಅಲ್ಲಿನ ವಾಸಿಗಳಲ್ಲಿ ಒಬ್ಬೊಬ್ಬರದ್ದೂ ಒಂದೊಂದು ಕಥೆ. ಕೆಲವರು ಜೈಲಿಗೂ ಹೋಗಿ ಬಂದವರು. ಮನೆ ಬಿಟ್ಟು ಬಂದವರು. ಪರಿವಾರ ತೊರೆದು ಪರದೇಶಿಗಳಾದವರು. ಅವರ ನಡುವೆ ಜಗಳವಿದೆ. ಕೋಪ ತಾಪಗಳು ಆಗಾಗ್ಗೆ ನಡೆಯುತ್ತವೆ. ಆದರೆ ಅದೆಲ್ಲವನ್ನೂ ಮೀರಿದ ಅನ್ಯೋನ್ಯತೆಯಿದೆ. ಸಮಾಜದ ಅಂಕುಡೊಂಕುಗಳ ಬಗ್ಗೆ ಈ ಕೆಳಗಿನವರು ಒಂದು ಪ್ರಬುದ್ಧ ದೃಷ್ಟಿಕೋನವನ್ನೂ ಹೊಂದಿದ್ದಾರೆ.
ಅಲ್ಲಿಗೆ ಬರುವ ಅಜ್ಜಯ್ಯ ತನ್ನದೇ ಕಲ್ಯಾಣ ರಾಜ್ಯ ಹುಡುಕುತ್ತಾ ಹೊರಟವನು. ಇಂದು ಅಲ್ಲಿಗೆ ಬಂದಿದ್ದನಷ್ಟೆ. ಅವರ ಬದುಕಿನ ಮೇಲೆ ಅಜ್ಜಯ್ಯ ಪ್ರಭಾವ ಬೀರುತ್ತಾನೆ. ಅವರ ಕಥೆಗಳಿಗೆ ಕಿವಿಯಾಗುತ್ತಾನೆ. ಅವರ ಭಾವನೆಗಳಿಗೆ ಮಾತಾಗುತ್ತಾನೆ. ಅವರ ಬದುಕಿಗೆ ದಾರಿಯಾದಂತೆ ಕಾಣುತ್ತಾನೆ.
ಸುಮಾರು ಎರಡೂವರೆಗಂಟೆಗಳ ಸುದೀರ್ಘನಾಟಕವಿದು. ಬದುಕಿನ ಸಂಕೀರ್ಣತೆಯನ್ನು ಮನಸ್ಸಿಗೆ ನಾಟುವಂತೆ ತೆರದಿಡಲಾಗಿದೆ. ನಾಟಕದಲ್ಲಿ ಹಾಸ್ಯವಿದೆ. ಗಂಭೀರ ಚಿಂತನೆಯಿದೆ. ನಗುವಿದೆ. ಅಳುವಿದೆ. ಸಂಗೀತವಿದೆ. ಒಂದು ಅದ್ಭುತ ಲೋಕದ ಅನಾವರಣಗೊಳಿಸಲಾಗಿದೆ.